23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 46 ವರ್ಷಗಳ ಕಾಲ ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ವಿವಿಧ ಸಂಘ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಸರಕಾರಿ ಇಲಾಖೆಗಳ ನೌಕರವರ್ಗದವರಿಗೆ, ಶಿಕ್ಷಕರಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದ್ದಾರೆ.

ನಾಟಕ, ಯಕ್ಷಗಾನಗಳಲ್ಲಿ ಹವ್ಯಾಸಿ ನಟರಾಗಿ ಅಭಿನಯಿಸಿದ್ದಲ್ಲದೆ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶನ ನೀಡಿದ್ದಾರೆ. ನಾಡಿನ ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಲ್ಲದೆ ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪುಸ್ತಕಗಳನ್ನು ಬರೆದಿದ್ದಾರೆ.

ಇವರ ಈ ಸಾಧನೆಗಳನ್ನು ಗುರುತಿಸಿ ಅಖಿಲ ಹವ್ಯಕ ಮಹಾಸಭೆಯು ತನ್ನ ತೃತೀಯ ವಿಶ್ವ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಣ ರತ್ನ
ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

Related posts

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ನರೇಗಾದಲ್ಲಿ ಗುರಿ ಸಾಧಿಸಿದ ಅರಸಿನಮಕ್ಕಿ ಗ್ರಾ.ಪಂ. ಗೆ ಪ್ರಶಂಸಾ ಪತ್ರ ಮತ್ತು ಸ್ಮರಣಿಕೆ ಗೌರವ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya
error: Content is protected !!