ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 46 ವರ್ಷಗಳ ಕಾಲ ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ವಿವಿಧ ಸಂಘ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಸರಕಾರಿ ಇಲಾಖೆಗಳ ನೌಕರವರ್ಗದವರಿಗೆ, ಶಿಕ್ಷಕರಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದ್ದಾರೆ.

ನಾಟಕ, ಯಕ್ಷಗಾನಗಳಲ್ಲಿ ಹವ್ಯಾಸಿ ನಟರಾಗಿ ಅಭಿನಯಿಸಿದ್ದಲ್ಲದೆ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶನ ನೀಡಿದ್ದಾರೆ. ನಾಡಿನ ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಲ್ಲದೆ ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪುಸ್ತಕಗಳನ್ನು ಬರೆದಿದ್ದಾರೆ.

ಇವರ ಈ ಸಾಧನೆಗಳನ್ನು ಗುರುತಿಸಿ ಅಖಿಲ ಹವ್ಯಕ ಮಹಾಸಭೆಯು ತನ್ನ ತೃತೀಯ ವಿಶ್ವ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಣ ರತ್ನ
ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

Related posts

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya
error: Content is protected !!