July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಯಾದವನು ಓದು , ಮನನ ಹಾಗೂ ಪುನರ್ಮನನಗಳ ಮೂಲಕ ಕಲಿಯಬೇಕು. ಚಿತ್ರಗಳನ್ನು ಕಲ್ಪಿಸಿ ಓದುವುದು , ಕೇಳಿ ಹಾಗೂ ನೋಡಿ ಕಲಿಯುವುದು , ಬರೆದು ಕಲಿಯುವುದು , ವೈಯಕ್ತಿಕ ಮನನ ಮಾಡಿ ಕಲಿಯುವುದು ಹೀಗೆ ವಿವಿಧ ಪ್ರಕಾರಗಳಲ್ಲಿ ಕಲಿಯುವಿಕೆ ಸಾಧ್ಯ.


ಹೆಚ್ಚಿನ ವಿಷಯಗಳನ್ನು ನಮ್ಮ ಮಾತೃ ಭಾಷೆಯಲ್ಲಿ ಕಲಿಯುವುದು ಹೆಚ್ಚು ರೂಢಿ ಮಾಡಿಕೊಂಡರೆ ಕಲಿಯಲು ಹಾಗೂ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಓದಿಕೊಳ್ಳುವ ಸಂದರ್ಭದಲ್ಲಿ ಬೆಳಕು , ಗಾಳಿ ಇತ್ಯಾದಿ ಪೂರಕ ವ್ಯವಸ್ಥೆ ಚೆನ್ನಾಗಿರಬೇಕು. ತುಂಬಾ ಶ್ರಮಪಟ್ಟು ಓದುವಿಕೆಗಿಂತ ಹೆಚ್ಚಾಗಿ ಬುದ್ದಿವಂತಿಕೆ ಹಾಗೂ ಕಾರ್ಯತಂತ್ರದ ಮೂಲಕ ಓದುವುದು ಸೂಕ್ತವೆಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ವತಿಯಿಂದ ನಡೆದ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಪ್ರಶಿಕ್ಷಣ ನೀಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ ಸ್ಮರಣಿಕೆ ನೀಡಿ ಗೌರವಿಸಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕ ರಜತ್ ಪಡ್ಕೆ ನಿರೂಪಿಸಿ, ಸಹ ಸಂಯೋಜಕಿ ಗೌತಮಿ ಜಿ. ವಂದಿಸಿದರು.

Related posts

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!