April 21, 2025
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

ಮೂಡಬಿದಿರೆ: ವಿವೇಕಾನಂದರು ಹುಡುಗಾಟಿಕೆಯ ವಯಸ್ಸಿನಲ್ಲಿ ಇಡೀ ಪ್ರಪಂಚವೇ ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದ ವೀರ ಸನ್ಯಾಸಿ. ಇಂತಹ ವ್ಯಕ್ತಿ ಬದುಕಿ ಬಾಳಿದಂತಹ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಎಂದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕು. ಯಾವುದನ್ನು ಪರೀಕ್ಷೀಸದೆ ನೇರವಾಗಿ ಒಪ್ಪಿಕೊಳ್ಳದ ಮನಸ್ಥಿತಿ ವಿವೇಕಾನಂದರದು. ಅವರು ತಮ್ಮ ಜೀವನದ ಮೂಲಕ ಯುವಕರಿಗೆ ದೃಷ್ಠಿಯ ಮಿತಿಯೊಳಗೆ ಹೊಸ ಹೋರಾಟದ ತತ್ವಗಳನ್ನು ಮತ್ತು ಸಮಾಜದ ಮೇಲೆ ಬಲವನ್ನು ತರುವ ಮಾರ್ಗಗಳನ್ನು ತೋರಿಸಿದ್ದರು. ನಮ್ಮ ದೇಶವು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬದಲಾಗಲು ಮತ್ತು ಮುಂದುವರಿಯಲು ಯುವಕ ಸಮಾಜದ ಸಕ್ರೀಯ ಭಾಗವಾಗಬೇಕು. ಈ ದೇಶದಲ್ಲಿರುವ ಪ್ರತಿಯೊಬ್ಬ ಯುವಕರು ಸ್ವಾಮಿ ವಿವೇಕಾನಂದರ ಚಿಂತನೆಯನ್ನು ಮೈಗೂಡಿಸಿಕೊಂಡು ಬಲಿಷ್ಠವಾದ ರಾಷ್ಟ್ರವನ್ನು ನಿರ್ಮಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಸಂಪತ್‌ಕುಮಾರ್ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಯುವಕರು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಸಮಾಜಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನು ಮಾಡಬೇಕು. ವಿವೇಕಾನಂದರು ದೇಶ ಕಂಡ ಮಹಾನ್ ವ್ಯಕ್ತಿ. ಅವರ ಚಿಂತನೆಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಗಳಾಗಿವೆ. ಅಂತಹ ಶ್ರೇಷ್ಠ ಪುರುಷನಂತೆ ಪ್ರತಿಯೊಬ್ಬರೂ ದೇಶಾಭಿಮಾನವನ್ನು ಹೊಂದಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಓಂ ರಾಷ್ಟ್ರೀಯ ಯುವ ದಿನದ ಮಹತ್ವವನ್ನು ವಾಚಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದರ ಜೀವನ ಕುರಿತಾದ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

Related posts

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

Suddi Udaya
error: Content is protected !!