23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಕುತ್ಲೂರು ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!