July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!