22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣದ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ಉಡುಪಿಯ ಹಿರಿಯಡ್ಕ ಜೈಲಿನಲ್ಲಿದ್ದು. ಬೆಳ್ತಂಗಡಿ ಪೊಲೀಸರು ಕಳ್ಳತನ ಪ್ರಕರಣದ ತನಿಖೆಗಾಗಿ ಪ್ರಮುಖ ಆರೋಪಿ‌ಯಾದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್ (22) ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ನಿಂದ ಬಾಡಿ ವಾರೆಂಟ್ ಪಡೆದು ಜ.13 ರಂದು ಬೆಳಗ್ಗೆ ಉಡುಪಿಯ ಹಿಡಿಯಡ್ಕ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಯನ್ನು (ಎರಡು ದಿನ)ಜ.13 ಮತ್ತು ಜ.14 ರಂದು ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಮಾಡಿದೆ‌.

ಆರೋಪಿಯನ್ನು ಪೊಲೀಸರು ಕಳ್ಳತನ ಮಾಡಿದ ವೈನ್ಸ್ ಶಾಪ್ ಗೆ ಕರೆತಂದು ಮಹಜರು ನಡೆಸಿದರು.

ಪ್ರಕರಣದ ವಿವರ: ಬೆಳ್ತಂಗಡಿ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಕಟ್ಟಡದ ನೆಲ ಮಹಡಿಯಲ್ಲಿರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಸುಮಾರು ಒಂಬತ್ತು ಸಾವಿರ ಹಣ ಹಾಗೂ ಬಿಯಾರ್ ಬಾಟಲಿಗಳನ್ನು ಕಳ್ಳತನ ಮಾಡಿದ ಘಟನೆ ಆ.13 ರಂದು ಭಾನುವಾರ ರಾತ್ರಿ ಸಂಭವಿಸಿತ್ತು.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.ಈ ಬಳಿಕ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಕರ್ನಾಟಕ ಬ್ಯಾಂಕ್ ಗೆ ಅ.16 ರಂದು ಕನ್ನ ಹಾಕುವಾಗ ಕುಂದಾಪುರ ಪೊಲೀಸರಿಗೆ ರೆಡ್ ಹ್ಯಾಂಡ್ ಅಗಿ ಮೊಹಮ್ಮದ್ ಹುಸೇನ್ ಮತ್ತು ಅಪ್ರಾಪ್ತ ಬಾಲಕನೊಬ್ಬ ಸಿಕ್ಕಿಬಿದ್ದು ಜೈಲುಪಾಲಾಗಿದ್ದರು.ಪೊಲೀಸರ ವಿಚಾರ ವೇಳೆ ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು.

Related posts

ಅಕ್ರಮ ಇಸ್ಪೀಟು ಅಡ್ಡೆಗೆ ಪೊಲೀಸ್ ದಾಳಿ: ನಗದು ಹಾಗೂ ಸೊತ್ತುಗಳ ಸಹಿತ 23 ಮಂದಿ ವಶ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ನ್ಯೂ ರೋಹಿಣಿ ಜ್ಯೂಸ್ ಸೆಂಟರ್ ಮಾಲಕ ಧನಂಜಯ ಹೃದಯಾಘಾತದಿಂದ ನಿಧನ: ಕೊಕ್ಕಡ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ ಇದ್ದರೂ ದೊರೆಯದ ಸೌಲಭ್ಯ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!