29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ  ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.

Related posts

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya
error: Content is protected !!