September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ  ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.

Related posts

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya
error: Content is protected !!