25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಶಿರ್ಲಾಲು ವಿ.ಹಿಂ.ಪ. ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 22ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya
error: Content is protected !!