July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!