23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

ಉಜಿರೆ: ನಮ್ಮ ದೇಶದ ಸಂಸ್ಕೃತಿ, ಆಧ್ಯಾತ್ಮಿಕತೆಯ ಶಕ್ತಿಯನ್ನು ಜಗತ್ತಿಗೆ ಪರಿಚಯಿಸಿ ಭಾರತದ ಬಗ್ಗೆ ಕೀಳು ಭಾವನೆ ಹೊಂದಿದ್ದ ಪಾಶ್ಚಾತ್ಯರು ನಮ್ಮೆಡೆಗೆ ಹೆಮ್ಮೆಯಿಂದ ತಿರುಗಿ ನೋಡುವಂತೆ ಮಾಡಿದವರು ಸ್ವಾಮಿ ವಿವೇಕಾನಂದರು.

ಅಜ್ಞಾನವೇ ದೌರ್ಬಲ್ಯ ; ದೌರ್ಬಲ್ಯವೇ ಸೋಲಿನ ಮೂಲ. ಆದ್ದರಿಂದ ಸರಿಯಾದ ಶಿಕ್ಷಣವನ್ನು ಪಡೆದು ಪ್ರಬುದ್ಧರಾಗಬೇಕು ಹಾಗೂ ಹಕ್ಕಿಯೊಂದು ಸರಿಯಾಗಿ ಹಾರಬೇಕೆಂದರೆ ಅದರ ಎರಡೂ ರೆಕ್ಕೆಗಳು ಬಲಿಷ್ಠವಾಗಿರಬೇಕು. ಒಂದು ರೆಕ್ಕೆ ಪುರುಷನಾದರೆ ಇನ್ನೊಂದು ಸ್ತ್ರೀ ಆಗಿರಬೇಕು. ಸ್ತ್ರೀ ಸಮಾನತೆಗೆ ಮಹತ್ವ ಕೊಡುವ ದೇಶ ಮಾತ್ರ ಸರ್ವಾಂಗೀಣ ಪ್ರಗತಿ ಸಾಧಿಸಬಹುದು ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು.

ಯುವಶಕ್ತಿ ದೇಶದ ಶಕ್ತಿ. ಸತ್ಯ ಮತ್ತು ಧೈರ್ಯದಿಂದ ಸಾಧನೆ ಮಾಡಬೇಕು. ವಿದ್ಯಾರ್ಥಿ ಸಮುದಾಯ ದುಶ್ಚಟ ಮತ್ತು ಆಕರ್ಷಣೆಗಳಿಂದ ವಿಮುಖರಾಗಿ ಸ್ವಾಮಿ ವಿವೇಕಾನಂದರು ಯುವಕರಿಗೆ ನೀಡಿದ ಅದ್ಭುತ ಸಂದೇಶಗಳನ್ನು ತಮ್ಮಲ್ಲಿ ಅಳವಡಿಸಿಕೊಂಡಲ್ಲಿ ತಮ್ಮ ಹಾಗೂ ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಬಹುದು ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಗ್ರಂಥಪಾಲಕ ಮನೋಹರ ಶೆಟ್ಟಿ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ರಾಷ್ಟ್ರೀಯ ಯುವದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಯುವದಿನದ ಸಂದೇಶ ನೀಡಿದರು.

ಸದ್ಭಾವನೆಯ ಗೋಡೆಯಾದ ಎಸ್ ಡಿ ಎಂ ವಾಲ್ ಆಫ್ ಗುಡ್ ವಿಲ್ ಇದಕ್ಕೆ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಗ್ರಂಥಪಾಲಕ ಮನೋಹರ ಶೆಟ್ಟಿ , ಘಟಕದ ನಾಯಕ ಆದಿತ್ಯ ವಿ , ನಾಯಕಿ ಪ್ರಾಪ್ತಿ ಗೌಡ ಹಾಗೂ ಸ್ವಯಂ ಸೇವಕರು ಅಗತ್ಯ ವಸ್ತುಗಳನ್ನು ನೀಡಿದರು.
ಯುವದಿನದ ಅಂಗವಾಗಿ ಸ್ವಯಂ ಸೇವಕರು ಉಜಿರೆ ಪರಿಸರದ ಸ್ವಚ್ಛತಾ ಕಾರ್ಯವನ್ನು ಸಹ ಮಾಡಿದರು.

ಸ್ವಯಂ ಸೇವಕರಾದ ರಾಶಿಕ ಸ್ವಾಗತಿಸಿ , ವಿನೋದ್ ವಂದಿಸಿದರು. ಮೌಲ್ಯ ನಿರೂಪಿಸಿದರು

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ನೂತನ ವಿಕಾರ್ ಜೆನರಲ್‌ಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya
error: Content is protected !!