April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳಲ್ಲಿ 46 ವರ್ಷಗಳ ಕಾಲ ಅಧ್ಯಾಪಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದಲ್ಲದೆ ವ್ಯಕ್ತಿತ್ವ ವಿಕಸನ ತರಬೇತುದಾರರಾಗಿ ವಿವಿಧ ಸಂಘ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಸರಕಾರಿ ಇಲಾಖೆಗಳ ನೌಕರವರ್ಗದವರಿಗೆ, ಶಿಕ್ಷಕರಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಿದ್ದಾರೆ.

ನಾಟಕ, ಯಕ್ಷಗಾನಗಳಲ್ಲಿ ಹವ್ಯಾಸಿ ನಟರಾಗಿ ಅಭಿನಯಿಸಿದ್ದಲ್ಲದೆ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಮಾರ್ಗದರ್ಶನ ನೀಡಿದ್ದಾರೆ. ನಾಡಿನ ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಲ್ಲದೆ ಆಕಾಶವಾಣಿಯಲ್ಲೂ ಕಾರ್ಯಕ್ರಮಗಳನ್ನು ನೀಡಿದ್ದಾರೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪುಸ್ತಕಗಳನ್ನು ಬರೆದಿದ್ದಾರೆ.

ಇವರ ಈ ಸಾಧನೆಗಳನ್ನು ಗುರುತಿಸಿ ಅಖಿಲ ಹವ್ಯಕ ಮಹಾಸಭೆಯು ತನ್ನ ತೃತೀಯ ವಿಶ್ವ ಸಮ್ಮೇಳನದಲ್ಲಿ ಹವ್ಯಕ ಶಿಕ್ಷಣ ರತ್ನ
ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

Related posts

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya
error: Content is protected !!