22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಯಾದವನು ಓದು , ಮನನ ಹಾಗೂ ಪುನರ್ಮನನಗಳ ಮೂಲಕ ಕಲಿಯಬೇಕು. ಚಿತ್ರಗಳನ್ನು ಕಲ್ಪಿಸಿ ಓದುವುದು , ಕೇಳಿ ಹಾಗೂ ನೋಡಿ ಕಲಿಯುವುದು , ಬರೆದು ಕಲಿಯುವುದು , ವೈಯಕ್ತಿಕ ಮನನ ಮಾಡಿ ಕಲಿಯುವುದು ಹೀಗೆ ವಿವಿಧ ಪ್ರಕಾರಗಳಲ್ಲಿ ಕಲಿಯುವಿಕೆ ಸಾಧ್ಯ.


ಹೆಚ್ಚಿನ ವಿಷಯಗಳನ್ನು ನಮ್ಮ ಮಾತೃ ಭಾಷೆಯಲ್ಲಿ ಕಲಿಯುವುದು ಹೆಚ್ಚು ರೂಢಿ ಮಾಡಿಕೊಂಡರೆ ಕಲಿಯಲು ಹಾಗೂ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಓದಿಕೊಳ್ಳುವ ಸಂದರ್ಭದಲ್ಲಿ ಬೆಳಕು , ಗಾಳಿ ಇತ್ಯಾದಿ ಪೂರಕ ವ್ಯವಸ್ಥೆ ಚೆನ್ನಾಗಿರಬೇಕು. ತುಂಬಾ ಶ್ರಮಪಟ್ಟು ಓದುವಿಕೆಗಿಂತ ಹೆಚ್ಚಾಗಿ ಬುದ್ದಿವಂತಿಕೆ ಹಾಗೂ ಕಾರ್ಯತಂತ್ರದ ಮೂಲಕ ಓದುವುದು ಸೂಕ್ತವೆಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ವತಿಯಿಂದ ನಡೆದ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಪ್ರಶಿಕ್ಷಣ ನೀಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ ಸ್ಮರಣಿಕೆ ನೀಡಿ ಗೌರವಿಸಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕ ರಜತ್ ಪಡ್ಕೆ ನಿರೂಪಿಸಿ, ಸಹ ಸಂಯೋಜಕಿ ಗೌತಮಿ ಜಿ. ವಂದಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya
error: Content is protected !!