23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

ಮೂಡಬಿದಿರೆ: ವಿವೇಕಾನಂದರು ಹುಡುಗಾಟಿಕೆಯ ವಯಸ್ಸಿನಲ್ಲಿ ಇಡೀ ಪ್ರಪಂಚವೇ ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದ ವೀರ ಸನ್ಯಾಸಿ. ಇಂತಹ ವ್ಯಕ್ತಿ ಬದುಕಿ ಬಾಳಿದಂತಹ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಎಂದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕು. ಯಾವುದನ್ನು ಪರೀಕ್ಷೀಸದೆ ನೇರವಾಗಿ ಒಪ್ಪಿಕೊಳ್ಳದ ಮನಸ್ಥಿತಿ ವಿವೇಕಾನಂದರದು. ಅವರು ತಮ್ಮ ಜೀವನದ ಮೂಲಕ ಯುವಕರಿಗೆ ದೃಷ್ಠಿಯ ಮಿತಿಯೊಳಗೆ ಹೊಸ ಹೋರಾಟದ ತತ್ವಗಳನ್ನು ಮತ್ತು ಸಮಾಜದ ಮೇಲೆ ಬಲವನ್ನು ತರುವ ಮಾರ್ಗಗಳನ್ನು ತೋರಿಸಿದ್ದರು. ನಮ್ಮ ದೇಶವು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬದಲಾಗಲು ಮತ್ತು ಮುಂದುವರಿಯಲು ಯುವಕ ಸಮಾಜದ ಸಕ್ರೀಯ ಭಾಗವಾಗಬೇಕು. ಈ ದೇಶದಲ್ಲಿರುವ ಪ್ರತಿಯೊಬ್ಬ ಯುವಕರು ಸ್ವಾಮಿ ವಿವೇಕಾನಂದರ ಚಿಂತನೆಯನ್ನು ಮೈಗೂಡಿಸಿಕೊಂಡು ಬಲಿಷ್ಠವಾದ ರಾಷ್ಟ್ರವನ್ನು ನಿರ್ಮಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಸಂಪತ್‌ಕುಮಾರ್ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಯುವಕರು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಸಮಾಜಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನು ಮಾಡಬೇಕು. ವಿವೇಕಾನಂದರು ದೇಶ ಕಂಡ ಮಹಾನ್ ವ್ಯಕ್ತಿ. ಅವರ ಚಿಂತನೆಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಗಳಾಗಿವೆ. ಅಂತಹ ಶ್ರೇಷ್ಠ ಪುರುಷನಂತೆ ಪ್ರತಿಯೊಬ್ಬರೂ ದೇಶಾಭಿಮಾನವನ್ನು ಹೊಂದಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಓಂ ರಾಷ್ಟ್ರೀಯ ಯುವ ದಿನದ ಮಹತ್ವವನ್ನು ವಾಚಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದರ ಜೀವನ ಕುರಿತಾದ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

Related posts

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಮೇಲಂತಬೆಟ್ಟು: ಪಕ್ಕಿದಕಲದಲ್ಲಿ ರಸ್ತೆಗೆ ಬಿದ್ದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya
error: Content is protected !!