September 6, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

ಮೂಡಬಿದಿರೆ: ವಿವೇಕಾನಂದರು ಹುಡುಗಾಟಿಕೆಯ ವಯಸ್ಸಿನಲ್ಲಿ ಇಡೀ ಪ್ರಪಂಚವೇ ತಮ್ಮ ಕಡೆ ತಿರುಗಿ ನೋಡುವಂತೆ ಮಾಡಿದ ವೀರ ಸನ್ಯಾಸಿ. ಇಂತಹ ವ್ಯಕ್ತಿ ಬದುಕಿ ಬಾಳಿದಂತಹ ದೇಶದಲ್ಲಿ ನಾವು ವಾಸಿಸುತ್ತಿದ್ದೇವೆ ಎಂದು ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕು. ಯಾವುದನ್ನು ಪರೀಕ್ಷೀಸದೆ ನೇರವಾಗಿ ಒಪ್ಪಿಕೊಳ್ಳದ ಮನಸ್ಥಿತಿ ವಿವೇಕಾನಂದರದು. ಅವರು ತಮ್ಮ ಜೀವನದ ಮೂಲಕ ಯುವಕರಿಗೆ ದೃಷ್ಠಿಯ ಮಿತಿಯೊಳಗೆ ಹೊಸ ಹೋರಾಟದ ತತ್ವಗಳನ್ನು ಮತ್ತು ಸಮಾಜದ ಮೇಲೆ ಬಲವನ್ನು ತರುವ ಮಾರ್ಗಗಳನ್ನು ತೋರಿಸಿದ್ದರು. ನಮ್ಮ ದೇಶವು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬದಲಾಗಲು ಮತ್ತು ಮುಂದುವರಿಯಲು ಯುವಕ ಸಮಾಜದ ಸಕ್ರೀಯ ಭಾಗವಾಗಬೇಕು. ಈ ದೇಶದಲ್ಲಿರುವ ಪ್ರತಿಯೊಬ್ಬ ಯುವಕರು ಸ್ವಾಮಿ ವಿವೇಕಾನಂದರ ಚಿಂತನೆಯನ್ನು ಮೈಗೂಡಿಸಿಕೊಂಡು ಬಲಿಷ್ಠವಾದ ರಾಷ್ಟ್ರವನ್ನು ನಿರ್ಮಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಸಂಪತ್‌ಕುಮಾರ್ ಕಲ್ಲಬೆಟ್ಟುವಿನ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಕಾರ್ಯದರ್ಶಿ ರಶ್ಮಿತಾ ಜೈನ್ ಯುವಕರು ದೇಶ ಕಟ್ಟುವ ಕೆಲಸದಲ್ಲಿ ತೊಡಗಿಕೊಳ್ಳಬೇಕು. ಸಮಾಜಕ್ಕೆ ಎಷ್ಟು ಸಾಧ್ಯವೋ ಅಷ್ಟು ಒಳ್ಳೆಯ ಕೆಲಸವನ್ನು ಮಾಡಬೇಕು. ವಿವೇಕಾನಂದರು ದೇಶ ಕಂಡ ಮಹಾನ್ ವ್ಯಕ್ತಿ. ಅವರ ಚಿಂತನೆಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಗಳಾಗಿವೆ. ಅಂತಹ ಶ್ರೇಷ್ಠ ಪುರುಷನಂತೆ ಪ್ರತಿಯೊಬ್ಬರೂ ದೇಶಾಭಿಮಾನವನ್ನು ಹೊಂದಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯೋಪಾಧ್ಯಾಯರಾದ ಜಯಶೀಲ ಉಪಸ್ಥಿತರಿದ್ದರು. ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಓಂ ರಾಷ್ಟ್ರೀಯ ಯುವ ದಿನದ ಮಹತ್ವವನ್ನು ವಾಚಿಸಿದರು. ಶಿಕ್ಷಕಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿವೇಕಾನಂದರ ಜೀವನ ಕುರಿತಾದ ರೂಪಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

Related posts

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya
error: Content is protected !!