25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಕಣಿಯೂರು ಕುಂಡಗುರಿ ಶ್ರೀಧರ ಸಾವಿನ ಪ್ರಕರಣಸಮಗ್ರ ತನಿಖೆಗೆ ಮೃತನ ಸಹೋದರ ಆಗ್ರಹ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya
error: Content is protected !!