25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

ಕೊಯ್ಯೂರು : ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಮತ್ತು ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆಯನ್ನು ಕೊಯ್ಯೂರು ಶ್ರೀ ಪಂಚಾದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ಅಶೋಕ್ ಕುಮಾರ್ ಬಾಂಗಿಣ್ಣಾಯ ಅಗ್ರಸಾಲೆ ಇವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕರ, ಪೋಷಕರ ಮತ್ತು ವಿದ್ಯಾರ್ಥಿಗಳ ಪಾತ್ರ ಬಹಳ ಮಹತ್ತರವಾದುದು. ಹಿರಿಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಶಾಲೆಯು ಅಭಿವೃದ್ಧಿಯನ್ನು ಹೊಂದಲು ಸಾಧ್ಯ ಎಂಬುದಾಗಿ ಹೇಳಿದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಯ್ಯೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ದಯಾಮಣಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರುಗಳಾದ ವಿಶಾಲಾಕ್ಷಿ, ಶಾರದಾ, ಶಿಕ್ಷಣ ಸಂಯೋಜಕರಾದ ಚೇತನಾಕ್ಷಿ, ಬೆಳ್ತಂಗಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಗೌಡ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತ ಕೃಷ್ಣ ಭಟ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಮಾವಿನಕಟ್ಟೆ, ಶಾಲಾ ವಿದ್ಯಾರ್ಥಿ ನಾಯಕ ಮಾಸ್ಟರ್ ಕಾರ್ತಿಕ್, ಅಶೋಕ್ ಮತ್ತು ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಚಂಪಾ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಸರ್ವಜ್ಞ ಜಯಂತಿ ಆಚರಣೆ:

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya
error: Content is protected !!