30.2 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

ಬೆಳ್ತಂಗಡಿ: ಆರೋಪಿ ಕಡಿರುದ್ಯಾವರ ಗ್ರಾಮದ ಸುಂದರ ಗೌಡ ಇವರು ಉಜಿರೆ ಗ್ರಾಮದ ಪಣಿಕ್ಕಲ್ ಮನೆಯ ಚಂದ್ರಶೇಖರ ಇವರಿಂದ ಐದು ಲಕ್ಷದ ಮೂವತ್ತು ಸಾವಿರ ಪಡಕೊಂಡಿದ್ದು, ಸದ್ರಿ ಸಾಲವನ್ನು ಮರುಪಾವತಿ ಮಾಡಲು ರೂ .5,30,000 ಚೆಕ್ಕನ್ನು ಚಂದ್ರಶೇಖರ ಇವರಿಗೆ ನೀಡಿದ್ದು, ಸದ್ರಿ ಚೆಕ್ಕನ್ನು ನಗದೀಕರಣಕ್ಕಾಗಿ ಬ್ಯಾಂಕ್‌ಗೆ ಹಾಜರು ಪಡಿಸಿದಾಗ ಖಾತೆಯಲ್ಲಿ ಸಾಕಷ್ಟು ಹಣವಿಲ್ಲವೆಂದು ಹಿಂದಿರುಗಿಸಿರುತ್ತಾರೆ. ಬೆಳ್ತಂಗಡಿ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಸಲ್ಲಿಸಿ, ನ್ಯಾಯಾಲಯವು ವಿಚಾರಣೆ ನಡೆಸಿ ಆರೋಪ ಸಾಬೀತು ಆಗದೇ ಇರುವುದರಿಂದ ಆರೋಪಿಯನ್ನು ದೋಷ ಮುಕ್ತಗೊಳಿಸಿ ಜ. 04 ರಂದು ನ್ಯಾಯಾಧೀಶರಾದ ಮನು ಬಿ ಕೆ ಇವರು ತೀರ್ಪು ನೀಡಿರುತ್ತಾರೆ.

ಆರೋಪಿಯ ಪರವಾಗಿ ವಕೀಲರಾದ ಗಣೇಶ್ ಗೌಡ ಮತ್ತು ಪ್ರಶಾಂತ್ ಎಮ್ ವಾದಿಸಿದ್ದರು.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

Suddi Udaya

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

Suddi Udaya
error: Content is protected !!