25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

ಬೆಳ್ತಂಗಡಿ : ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರವನ್ನು ಜ.13 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಉಪಕೃಷಿ ನಿರ್ದೇಶಕ ಶಿವಶಂಕರ್ ಹೆಚ್. ದಾನೆಗೊಂಡರ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು, ಹಿರಿಯ ವಿಜ್ಞಾನಿ ಡಾ. ಟಿ ಜೆ ರಮೇಶ್ ಉಪಸ್ಥಿತರಿದ್ದರು.

ನಂತರ ದೇಸಿ ತಳಿಗಳ ಸಂರಕ್ಷಣೆ ಮತ್ತು ಅಗತ್ಯತೆ ಕುರಿತು ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್, ಸುರ್ಯ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಭತ್ತದ ತಳಿ ಸಂರಕ್ಷಣೆ, ಅಗತ್ಯತೆ ವಿಧಾನ, ಹಾಗೂ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ ಪುರಸ್ಕೃತ ತಳಿ ತಪಸ್ವಿ ಬಿ. ಕೆ. ದೇವರಾವ್ ರವರು ಭತ್ತದ ತಳಿ ಸಂರಕ್ಷಣೆ ಬಗ್ಗೆ ಉಪನ್ಯಾಸವನ್ನು ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂಗಳು ಹಾಗೂ ಪ್ರಗತಿಪರ ಕೃಷಿಕರು ಭಾಗವಹಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಎ.ಡಿ ಸ್ವಾಗತಿಸಿದರು.ಬೆಳ್ತಂಗಡಿ ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ನಿರ್ದೇಶಕ ಗಣೇಶ್ ಧನ್ಯವಾದವಿತ್ತರು.

Related posts

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya
error: Content is protected !!