23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಜ.13 ರಂದು ಕಂಠಿ ಉತ್ಸವಕ್ಕೆ ಚಾಲನೆ ನೀಡಿ ಹಾಗೂ ತಾಲೂಕಿನ 5 ಮಂದಿ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಸುರೇಂದ್ರ ರವರು ಉಪಸ್ಥಿತರಿದ್ದು ಕಂಠಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ 5 ಮಂದಿ ಕೃಷಿ ಸಾಧಕರಾದ ಜಗದೀಶ್ ಪ್ರಸಾದ್ ಮುಂಡಾಜೆ (ಸಮಗ್ರ ಕೃಷಿ), ಶಾಮ್ ಸುಂದರ್ ಭಟ್ ಬಲೆಂಜ (ಜೇನು ಕೃಷಿ), ಶ್ರೀಕೃಷ್ಣ ಭಟ್ ಲಾಯಿಲ (ಪಾರಂಪರಿಕ ಕೃಷಿ), ಈಶ್ವರ್ ಭಟ್ ಅತ್ತಾಜೆ(ಪಾರಂಪರಿಕ ಕೃಷಿ), ಜಯ ನಾರಾಯಣ ಉಪಾಧ್ಯಾಯ (ಸಮಗ್ರ ಕೃಷಿ) ರವರುಗಳನ್ನು “ಶ್ರೇಷ್ಠ ಕೃಷಿ ಸಾಧಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿಗಳು ಪ್ರಾರ್ಥಿಸಿದರು. ರೋಹಿತ್ ನಿರೂಪಿಸಿ ಧನ್ಯವಾದವಿತ್ತರು.

ಕಂಠಿ ಉತ್ಸವವು ಜ.13 ರಿಂದ ಫೆ. 13 ರವರೆಗೆ ನಡೆಯಲಿದ್ದು ವಿಶಿಷ್ಟ ಕರಿಮಣಿ ಆಭರಣಗಳು ಹಾಗೂ ಹಳೆಯ ಚಿನ್ನದ ವಿನಿಮಯದಲ್ಲಿ 151 ರೂಪಾಯಿಗಳ ಅಧಿಕ ಕೊಡುಗೆಯನ್ನು ಪಡೆಯಬಹುದು.

Related posts

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya
error: Content is protected !!