ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಜ.13 ರಂದು ಕಂಠಿ ಉತ್ಸವಕ್ಕೆ ಚಾಲನೆ ನೀಡಿ ಹಾಗೂ ತಾಲೂಕಿನ 5 ಮಂದಿ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಸುರೇಂದ್ರ ರವರು ಉಪಸ್ಥಿತರಿದ್ದು ಕಂಠಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ 5 ಮಂದಿ ಕೃಷಿ ಸಾಧಕರಾದ ಜಗದೀಶ್ ಪ್ರಸಾದ್ ಮುಂಡಾಜೆ (ಸಮಗ್ರ ಕೃಷಿ), ಶಾಮ್ ಸುಂದರ್ ಭಟ್ ಬಲೆಂಜ (ಜೇನು ಕೃಷಿ), ಶ್ರೀಕೃಷ್ಣ ಭಟ್ ಲಾಯಿಲ (ಪಾರಂಪರಿಕ ಕೃಷಿ), ಈಶ್ವರ್ ಭಟ್ ಅತ್ತಾಜೆ(ಪಾರಂಪರಿಕ ಕೃಷಿ), ಜಯ ನಾರಾಯಣ ಉಪಾಧ್ಯಾಯ (ಸಮಗ್ರ ಕೃಷಿ) ರವರುಗಳನ್ನು “ಶ್ರೇಷ್ಠ ಕೃಷಿ ಸಾಧಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿಗಳು ಪ್ರಾರ್ಥಿಸಿದರು. ರೋಹಿತ್ ನಿರೂಪಿಸಿ ಧನ್ಯವಾದವಿತ್ತರು.

ಕಂಠಿ ಉತ್ಸವವು ಜ.13 ರಿಂದ ಫೆ. 13 ರವರೆಗೆ ನಡೆಯಲಿದ್ದು ವಿಶಿಷ್ಟ ಕರಿಮಣಿ ಆಭರಣಗಳು ಹಾಗೂ ಹಳೆಯ ಚಿನ್ನದ ವಿನಿಮಯದಲ್ಲಿ 151 ರೂಪಾಯಿಗಳ ಅಧಿಕ ಕೊಡುಗೆಯನ್ನು ಪಡೆಯಬಹುದು.

Related posts

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
error: Content is protected !!