July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಜ.13 ರಂದು ಕಂಠಿ ಉತ್ಸವಕ್ಕೆ ಚಾಲನೆ ನೀಡಿ ಹಾಗೂ ತಾಲೂಕಿನ 5 ಮಂದಿ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಸುರೇಂದ್ರ ರವರು ಉಪಸ್ಥಿತರಿದ್ದು ಕಂಠಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ 5 ಮಂದಿ ಕೃಷಿ ಸಾಧಕರಾದ ಜಗದೀಶ್ ಪ್ರಸಾದ್ ಮುಂಡಾಜೆ (ಸಮಗ್ರ ಕೃಷಿ), ಶಾಮ್ ಸುಂದರ್ ಭಟ್ ಬಲೆಂಜ (ಜೇನು ಕೃಷಿ), ಶ್ರೀಕೃಷ್ಣ ಭಟ್ ಲಾಯಿಲ (ಪಾರಂಪರಿಕ ಕೃಷಿ), ಈಶ್ವರ್ ಭಟ್ ಅತ್ತಾಜೆ(ಪಾರಂಪರಿಕ ಕೃಷಿ), ಜಯ ನಾರಾಯಣ ಉಪಾಧ್ಯಾಯ (ಸಮಗ್ರ ಕೃಷಿ) ರವರುಗಳನ್ನು “ಶ್ರೇಷ್ಠ ಕೃಷಿ ಸಾಧಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿಗಳು ಪ್ರಾರ್ಥಿಸಿದರು. ರೋಹಿತ್ ನಿರೂಪಿಸಿ ಧನ್ಯವಾದವಿತ್ತರು.

ಕಂಠಿ ಉತ್ಸವವು ಜ.13 ರಿಂದ ಫೆ. 13 ರವರೆಗೆ ನಡೆಯಲಿದ್ದು ವಿಶಿಷ್ಟ ಕರಿಮಣಿ ಆಭರಣಗಳು ಹಾಗೂ ಹಳೆಯ ಚಿನ್ನದ ವಿನಿಮಯದಲ್ಲಿ 151 ರೂಪಾಯಿಗಳ ಅಧಿಕ ಕೊಡುಗೆಯನ್ನು ಪಡೆಯಬಹುದು.

Related posts

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾಗೇಶ್ ಕುಲಾಲ್ ರಿಗೆ ಗೌರವಾರ್ಪಣೆ

Suddi Udaya

ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇಲ್ಲಿನ ಬಾಲಕರ ತಂಡ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

Suddi Udaya
error: Content is protected !!