July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಉತ್ಕೃಷ್ಟ ಶೈಕ್ಷಣಿಕ ಸಾಧನೆ,ಅಭಿನಂದಿಸಿದ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ : ರಾಷ್ಟ್ರಮಟ್ಟದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya
error: Content is protected !!