ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವಾರ್ಷಿಕ ಮಹಾಸಭೆ, ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ

Suddi Udaya
error: Content is protected !!