September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ.

ಬಿಜೆಪಿ ನಾಯಕ, ವೇಣೂರು ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ಇವರ ನೇತೃತ್ವದ ಸಹಕಾರ ಭಾರತಿ ಬಿಜೆಪಿ ಬೆಂಬಲಿತ‌ 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿ ಗೆಲುವು ದಾಖಲಿಸಿದರು.

ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಂದರ ಹೆಗ್ಡೆ,ರಾಮದಾಸ್ ನಾಯಕ್,ಸಂದೀಪ್ ಹೆಗ್ಡೆ,ರತ್ನಾಕರ ಬಿ,ಪ್ರವೀಣ್ ಪೂಜಾರಿ,ಕೃಷ್ಣಪ್ಪ ಮೂಲ್ಯ,ನಾಗಪ್ಪ,ರಾಜು ನಾಯ್ಕ,ಪ್ರಶಾಂತ್ ಪೂಜಾರಿ,ಎಂ.ಆರ್ ಸಂತೋಷ್,ಆಶಾ ಸುಂದರ್,ರೋಹಿಣಿ ಪ್ರಕಾಶ್ ಜಯಗಳಿಸಿದರು.ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಸೇಸ,ವಿಮಲ ನಾಯ್ಕ,ಲಕ್ಷ್ಮಣ ಪೂಜಾರಿ,ತೋಮಸ್ ಆರ್ ನೊರೊನ್ನ,ಗುಣವತಿ,ಸೂರ್ಯಪ್ರಭಾ,ಚಂದಪ್ಪ ಮೂಲ್ಯ,ದಯಾನಂದ ದೇವಾಡಿಗ,ದೇಜಪ್ಪ ಶೆಟ್ಟಿ ಪಿ,ಲಕ್ಷ್ಮಣ ಪಿ,ವಿಶ್ವನಾಥ ಪೂಜಾರಿ,ಹರೀಶ್ ಕುಮಾರ್ ಪೊಕ್ಕಿ ಪರಜಯಗೊಂಡರು.

ಜ. 12 ರಂದು ಚುನಾವಣೆ ನಡೆದಿದೆ. ಚುನಾವಣಾಧಿಕಾರಿಯಾಗಿ ಪ್ರತಿಮಾ ಸಹಕರಿಸಿದರು.ವೇಣೂರು ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.ಶಾಸಕ ಹರೀಶ್ ಪೂಂಜ,ಜಯಂತ್ ಕೋಟ್ಯಾನ್ ಹಾಗೂ ಇತರರು ಆಗಮಿಸಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

ಫಲಿತಾಂಶವನ್ನು ಹೈಕೋರ್ಟ್ ಆದೇಶದ ಬಳಿಕ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

Related posts

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ, ವಲಯ ಬಂಟರ ಸಂಘ, ಉಜಿರೆ ಹಾಗೂ ಬಂಟರ ಗ್ರಾಮ ಸಮಿತಿ ಉಜಿರೆ ಮುಂಡಾಜೆ ಮತ್ತು ತೋಟತ್ತಾಡಿ ಇವುಗಳ ಸಹಭಾಗಿತ್ವದಲ್ಲಿ ಉಜಿರೆ ವಲಯ ಬಂಟರ ಕ್ರೀಡಾಕೂಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂಟಿಸಲಗ ಪ್ರತ್ಯಕ್ಷ: ವಾಹನ ಸವಾರರ ಪರದಾಟ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya
error: Content is protected !!