22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

ಉಜಿರೆ: ವಿದ್ಯಾರ್ಥಿಯಾದವನು ಓದು , ಮನನ ಹಾಗೂ ಪುನರ್ಮನನಗಳ ಮೂಲಕ ಕಲಿಯಬೇಕು. ಚಿತ್ರಗಳನ್ನು ಕಲ್ಪಿಸಿ ಓದುವುದು , ಕೇಳಿ ಹಾಗೂ ನೋಡಿ ಕಲಿಯುವುದು , ಬರೆದು ಕಲಿಯುವುದು , ವೈಯಕ್ತಿಕ ಮನನ ಮಾಡಿ ಕಲಿಯುವುದು ಹೀಗೆ ವಿವಿಧ ಪ್ರಕಾರಗಳಲ್ಲಿ ಕಲಿಯುವಿಕೆ ಸಾಧ್ಯ.


ಹೆಚ್ಚಿನ ವಿಷಯಗಳನ್ನು ನಮ್ಮ ಮಾತೃ ಭಾಷೆಯಲ್ಲಿ ಕಲಿಯುವುದು ಹೆಚ್ಚು ರೂಢಿ ಮಾಡಿಕೊಂಡರೆ ಕಲಿಯಲು ಹಾಗೂ ಅರಿತುಕೊಳ್ಳಲು ಸಾಧ್ಯವಾಗುತ್ತದೆ. ಓದಿಕೊಳ್ಳುವ ಸಂದರ್ಭದಲ್ಲಿ ಬೆಳಕು , ಗಾಳಿ ಇತ್ಯಾದಿ ಪೂರಕ ವ್ಯವಸ್ಥೆ ಚೆನ್ನಾಗಿರಬೇಕು. ತುಂಬಾ ಶ್ರಮಪಟ್ಟು ಓದುವಿಕೆಗಿಂತ ಹೆಚ್ಚಾಗಿ ಬುದ್ದಿವಂತಿಕೆ ಹಾಗೂ ಕಾರ್ಯತಂತ್ರದ ಮೂಲಕ ಓದುವುದು ಸೂಕ್ತವೆಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸುಧೀರ್ ಕೆ.ವಿ. ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ವತಿಯಿಂದ ನಡೆದ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಪ್ರಶಿಕ್ಷಣ ನೀಡಿದರು.

ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕೃತ ಸಂಘದ ಅಧ್ಯಕ್ಷ ಗುರುದತ್ತ ಮರಾಠೆ ಸ್ಮರಣಿಕೆ ನೀಡಿ ಗೌರವಿಸಿದರು.
ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕ ರಜತ್ ಪಡ್ಕೆ ನಿರೂಪಿಸಿ, ಸಹ ಸಂಯೋಜಕಿ ಗೌತಮಿ ಜಿ. ವಂದಿಸಿದರು.

Related posts

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!