32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಜಿ. ಪಂ. ಹಿ. ಪ್ರಾ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆ

ಕಡಿರುದ್ಯಾವರ : ದ. ಕ. ಜಿ. ಪಂ ಹಿ. ಪ್ರಾ ಶಾಲೆ ಕಡಿರುದ್ಯಾವರ ದಲ್ಲಿ ಶಾಲಾ ಎಸ್.ಡಿ.ಎಮ್.ಸಿ ಹಾಗೂ ಪೋಷಕರ ಸಭೆಯು ಜ.11 ರಂದು ನಡೆಸಲಾಯಿತು.


ಈ ವೇಳೆ ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನವರ ಸಹಕಾರದಿಂದ ಶಾಲೆಗೆ ಹಾಗೂ ಮಕ್ಕಳಿಗೆ ವಿವಿಧ ವಸ್ತುಗಳನ್ನ ಕೊಡುಗೆಯಾಗಿ ನೀಡಲಾಯಿತು..


ದಾನಿಗಳಾದ ನವೀನ್ ಕಾನರ್ಪ ರವರು ಮಕ್ಕಳಿಗೆ ಐಡಿ ಕಾರ್ಡ್, ರೇಖಾ ಅರಮನೆ ಹಿತ್ಲು ರವರು ಮಕ್ಕಳಿಗೆ ಟೈ ಹಾಗೂ ಬೆಲ್ಟ್, ಸತೀಶ್ ಗೌಡ ಎರ್ಮಾಲ್ ಪಾಲ್ಕೆ, ಪವಿತ್ರಗೌಡ ಸಾಲ್ ಪಿಲ, ರೂಪಲತಾ ಗೌಡ ಸಾಲ್ ಪಿಲ ರವರು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಫಿಲ್ಟರ್, ಚಂದ್ರಶೇಖರ್ ಶ್ರೀಮತಿ ಸವಿತಾ ಗಜಂತೋಡಿ ಭಾರತೀಯ ಸೈನಿಕರು ಶಾಲೆಗೆ ಗಾಡ್ರೇಜ್ ಬೀರು ನೀಡಿದರು.


ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಸರಸ್ವತಿ, ಸದ್ಯಸರು, ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಪ್ರದೀಪ್ ಎಮ್, ಶಾಲೆಯ ಹಿರಿಯ ವಿದ್ಯಾರ್ಥಿ ನಾರಾಯಣ , ಶಾಲಾ ಶಿಕ್ಷಕಿಯರಾದ ಶ್ರೀಮತಿ ಅಸ್ಮಿತಾ , ಶ್ರೀಮತಿ ನಮಿತಾ, ಕುಮಾರಿ ಅನಿತಾ, ಶ್ರೀಮತಿ ಕೀರ್ತಿಕಾ ಹಾಗೂ ಶಾಲಾ ಮಕ್ಕಳ ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

Related posts

ಭಾರೀ ಮಳೆಗೆ ಕಾಯರ್ತಡ್ಕ ಮೈರಾರ್ ‍ನಲ್ಲಿ ಸೇತುವೆ ಮುಳುಗಡೆ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya
error: Content is protected !!