37.2 C
ಪುತ್ತೂರು, ಬೆಳ್ತಂಗಡಿ
April 16, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕೊಕ್ಕಡ ಸಂಗಮ್ ಯುವಕ ಮಂಡಲ ಇದರ ಸರ್ವ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಕೊಕ್ಕಡ ಯುವಕ ಮಂಡಲದ ಆವರಣದಲ್ಲಿ ಜ.12ರಂದು ನಡೆಯಿತು.

ಅಧ್ಯಕ್ಷತೆಯನ್ನು ಹಿರಿಯರಾದ ಕುಂಞಿಕಣ್ಣನ್ ಅವರು ವಹಿಸಿದ್ದರು. ಯುವಕ ಮಂಡಲ ಕೊಕ್ಕಡ ಸಂಗಮ್ ಯುವಕ ಮಂಡಲ ಅಧ್ಯಕ್ಷ ರೂಪೇಶ್, ಹಿರಿಯರಾದ ಗಣೇಶ್ ದೇವಾಡಿಗ, ರಜಾಕ್ ದುಬೈ ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಯುವಕ ಮಂಡಲದ ಚಟುವಟಿಕೆಗಳ ಬಗ್ಗೆ ಚರ್ಚಿಸಿ, ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಎಸ್.ಕೆ.ಹಕೀಂ, ಉಪಾಧ್ಯಕ್ಷರಾಗಿ ಅವಿನಾಶ್.ಕೆ, ಆಸೀಫ್, ಸುನೀತ್ ಅಗರ್ತ, ದಯಾನೀಶ್, ರಜಾಕ್ ಐವಾನ್, ಕಾರ್ಯದರ್ಶಿಯಾಗಿ ಸುನಿಶ್ ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ಆನ್ಸರ್, ಕೋಶಾಧಿಕಾರಿಯಾಗಿ ಗಿರೀಶ್ ಶಬರಾಡಿ, ಸದಸ್ಯರಾಗಿ ಚೇತನ್.ಟಿ.ಎಲ್, ಶರೀಫ್ ಆಲ್ಫಾ, ಉಮರ್ ಬೈಲಂಗಡಿ, ಅಶ್ವಿನ್ ಸಾಲಿಯಾನ್, ಮಿಥಿಲೇಶ್, ಹಕೀಂ ಮುಂಡೇಲ್ ಇವರುಗಳನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಯಿತು.

ರಜಾಕ್.ಎಂ.ಎಚ್ ಸ್ವಾಗತಿಸಿದರು, ರಾಜಗೋಪಾಲ್ ಬೆನಕ ವಂದಿಸಿದರು.

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ತ್ಯಾಜ್ಯದಿಂದ ಸೋಮನಾಥ ನದಿಯ ನೀರು ಕಲುಷಿತ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ ಯವರಿಂದ ಸೂಕ್ತ ಕಾನೂನು ಕ್ರಮಕ್ಕೆ ಕಳಿಯ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ

Suddi Udaya

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya
error: Content is protected !!