25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಶ್ರೀ ಗೋಪಾಲ ಕೃಷ್ಣ ದೇವರಿಗೆ ವಿಶೇಷ ಪೂಜೆ: ಶಾಸಕ ಹರೀಶ್ ಪೂಂಜರಿಂದ ಅಭಿವೃದ್ಧಿಕಾರ್ಯದ ಬಗ್ಗೆ ಸಭೆ

ತೆಕ್ಕಾರು: ಇಲ್ಲಿಯ ಶ್ರೀ ಗೋಪಾಲ ಕೃಷ್ಣ ದೇವರಿಗೆ ಪ್ರತಿ ತಿಂಗಳ ರೋಹಿಣಿ ನಕ್ಷತ್ರದ ದಿನದಂದು ನಡೆಯುವ ಹಣ್ಣು ಕಾಯಿ ಸೇವೆ, ವಿಶೇಷ ಪೂಜೆ ಜ.11 ರಂದು ನಡೆಯಿತು.


ಅನ್ಯರ ಪಾಲಗಿ ಅವನತಿಹೊಂದಿದ್ದ ದೇವಾಲಯವು ಹಲವು ವರುಷಗಳ ಶ್ರಮದ ಫಲವಾಗಿ ಇದೀಗ ಮತ್ತೆ ಭವ್ಯವಾದ
ದೇವಾಲಯ ಪುನರುತ್ಥಾನದ ಕಾರ್ಯ ಭರದಿಂದ ಸಾಗುತ್ತಿದ್ದು, ಈಗಾಗಲೇ ಗರ್ಭಗುಡಿಯ ಕೆಲಸ ಅಂತಿಮ ಹಂತದಲ್ಲಿದ್ದು ಕೆಲವೇ ದಿನಗಳಲ್ಲಿ ಹೊರಾಂಗಣದ ಕೆಲಸ ಪ್ರಾರಂಭವಾಗುತ್ತಿರುವ ಸಂದರ್ಭದಲ್ಲಿ ದೇವಸ್ಥಾನ ನಿರ್ಮಾಣ ಕಾರ್ಯದ ಪ್ರಧಾನ ತಂತ್ರಿವರ್ಯರಾದ ನೀಲೇಶ್ವರ ಉಚ್ಚಿಲತ್ತಾಯ‌ ಪದ್ಮನಾಭ ತಂತ್ರಿಗಳು ಆಗಮಿಸಿ ನಿರ್ಮಾಣ ಕಾರ್ಯ ವೀಕ್ಷಣೆ ಮಾಡಿ ಮುಂದಿನ ಹಂತದ ನಿರ್ಮಾಣ ಕೆಲಸಗಳ ಬಗ್ಗೆ ಶಿಲ್ಪಿ ಉಮೇಶ್ ಅವರಿಗೆ ಮಾರ್ಗದರ್ಶನ ನೀಡಿದರು.

ನಂತರ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭಾಗವಹಿಸಿ ಜೀರ್ಣೋದ್ಧಾರ ನಂತರ ಪ್ರತಿಷ್ಠೆ ಸಂದರ್ಭದಲ್ಲಿ ವಾಹನ ನಿಲುಗಡೆ ಅನ್ನ ಸಂತರ್ಪಣೆಗೆ ಸ್ಥಳಾವಕಾಶ ಕಲ್ಪಿಸುವ ಕುರಿತು ಊರವರೊಂದಿಗೆ ಸಮಾಲೋಚನೆ ನಡೆಸಿ ಶ್ರೀ ಗೋಪಾಲಕೃಷ್ಣನ ಈ ಸನ್ನಿಧಿಯು ವಿಶೇಷವಾದ ಪರಿಕಲ್ಪನೆಯೊಂದಿಗೆ ಪ್ರತಿಷ್ಠಾಪನೆ ಮಾಡೋಣವೆಂದು ತಿಳಿಸಿದರು. ಅಭಿವೃದ್ಧಿಕಾರ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.


ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನವೀನ್ ನೆರಿಯ, ಟ್ರಸ್ಟ್ ಸಂಚಾಲಕ ಲಕ್ಷ್ಮಣ್ ಬಟ್ರೆಬೈಲು, ಗೌರವಾಧ್ಯಕ್ಷರಾದ ತುಕಾರಾಮ ನಾಯಕ್ , ಟ್ರಸ್ಟಿಗಳು, ಜೀರ್ಣೋದ್ಧಾರ ಸಮಿತಿಯ ಪ್ರಮುಖರು, ಉಪಾಧ್ಯಕ್ಷರಾದ, ಅನಂತಪ್ರಾಸಾದ್, ಕೇಶವ ಪೂಜಾರಿ, ಧರ್ಣಪ್ಪ ಪೂಜಾರಿ, ಬಾಬುಮೂಲ್ಯ, ಜಯಾನಂದ ಕಲ್ಲಾಪು, ಚಿದಾನಂದ ಪೊರ್ಕಳ, ಊರವರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆ ಪ್ರಕರಣ: ಆರೋಪಿ ಪ್ರೋಫೆಸರ್ ಬಂಧನ; ಮೃತದೇಹ ದೆಹಲಿಗೆ ಆಗಮನ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!