July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಸಿರಿಗಳ ಕ್ಷೇತ್ರ ಬದಿನಡೆ ಬಳಂಜದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ನೇಮೋತ್ಸವ ಜ. 13 ರಂದು ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ, ಶನೈಶ್ಚರ ಶಾಂತಿ ಹೋಮ, ಸಾರ್ವಜನಿಕ ಶನೈಶ್ಚರ ಪೂಜೆ ನಡೆಯಿತು.

ಸಂಜೆ ದೊಡ್ಡ ರಂಗಪೂಜೆ, ದುರ್ಗಾ ಪೂಜೆ, ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಸದಸ್ಯರಿಂದ ಕುಣಿತ ಭಜನೆ, ಪಂಚಶ್ರೀ ಮಹಿಳಾ ಭಜನಾ ಮಂಡಳಿ ಬಳಂಜ ಹಾಗೂ ಸ್ವಾತಿ ಮ್ಯೂಸಿಕಲ್ ಕಾರ್ಯಾಣ ಭಜನಾ ಕಾರ್ಯಕ್ರಮ, ದೇವರ ಬಲಿ ಉತ್ಸವ, ಆಶ್ಲೇಷ ಬಲಿ, ಸಾರ್ವಜನಿಕ ಅನ್ನ ಸಂತರ್ಪಣೆ, ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮರ್ಮದರ್ಶಿ ಜಯ ಸಾಲಿಯಾನ್ ಮತ್ತು ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ – 2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಸ್ಪರ್ಧೆಗಳು

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!