38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

ಬೆಳ್ತಂಗಡಿ : ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರವನ್ನು ಜ.13 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಉಪಕೃಷಿ ನಿರ್ದೇಶಕ ಶಿವಶಂಕರ್ ಹೆಚ್. ದಾನೆಗೊಂಡರ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು, ಹಿರಿಯ ವಿಜ್ಞಾನಿ ಡಾ. ಟಿ ಜೆ ರಮೇಶ್ ಉಪಸ್ಥಿತರಿದ್ದರು.

ನಂತರ ದೇಸಿ ತಳಿಗಳ ಸಂರಕ್ಷಣೆ ಮತ್ತು ಅಗತ್ಯತೆ ಕುರಿತು ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್, ಸುರ್ಯ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಭತ್ತದ ತಳಿ ಸಂರಕ್ಷಣೆ, ಅಗತ್ಯತೆ ವಿಧಾನ, ಹಾಗೂ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ ಪುರಸ್ಕೃತ ತಳಿ ತಪಸ್ವಿ ಬಿ. ಕೆ. ದೇವರಾವ್ ರವರು ಭತ್ತದ ತಳಿ ಸಂರಕ್ಷಣೆ ಬಗ್ಗೆ ಉಪನ್ಯಾಸವನ್ನು ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂಗಳು ಹಾಗೂ ಪ್ರಗತಿಪರ ಕೃಷಿಕರು ಭಾಗವಹಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಎ.ಡಿ ಸ್ವಾಗತಿಸಿದರು.ಬೆಳ್ತಂಗಡಿ ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ನಿರ್ದೇಶಕ ಗಣೇಶ್ ಧನ್ಯವಾದವಿತ್ತರು.

Related posts

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya
error: Content is protected !!