24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

ಬೆಳ್ತಂಗಡಿ : ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರವನ್ನು ಜ.13 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಉಪಕೃಷಿ ನಿರ್ದೇಶಕ ಶಿವಶಂಕರ್ ಹೆಚ್. ದಾನೆಗೊಂಡರ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥರು, ಹಿರಿಯ ವಿಜ್ಞಾನಿ ಡಾ. ಟಿ ಜೆ ರಮೇಶ್ ಉಪಸ್ಥಿತರಿದ್ದರು.

ನಂತರ ದೇಸಿ ತಳಿಗಳ ಸಂರಕ್ಷಣೆ ಮತ್ತು ಅಗತ್ಯತೆ ಕುರಿತು ಮಣ್ಣು ವಿಜ್ಞಾನ ವಿಭಾಗದ ವಿಜ್ಞಾನಿ ಡಾ. ಮಲ್ಲಿಕಾರ್ಜುನ ಎಲ್, ಸುರ್ಯ ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಭತ್ತದ ತಳಿ ಸಂರಕ್ಷಣೆ, ಅಗತ್ಯತೆ ವಿಧಾನ, ಹಾಗೂ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ ಪುರಸ್ಕೃತ ತಳಿ ತಪಸ್ವಿ ಬಿ. ಕೆ. ದೇವರಾವ್ ರವರು ಭತ್ತದ ತಳಿ ಸಂರಕ್ಷಣೆ ಬಗ್ಗೆ ಉಪನ್ಯಾಸವನ್ನು ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂಗಳು ಹಾಗೂ ಪ್ರಗತಿಪರ ಕೃಷಿಕರು ಭಾಗವಹಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಿಬ್ಬಂದಿಗಳು ಪ್ರಾರ್ಥಿಸಿ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪ ಎ.ಡಿ ಸ್ವಾಗತಿಸಿದರು.ಬೆಳ್ತಂಗಡಿ ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯ ಕೃಷಿ ನಿರ್ದೇಶಕ ಗಣೇಶ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
error: Content is protected !!