April 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

ಬೆಳ್ತಂಗಡಿ : ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣದ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ಉಡುಪಿಯ ಹಿರಿಯಡ್ಕ ಜೈಲಿನಲ್ಲಿದ್ದು. ಬೆಳ್ತಂಗಡಿ ಪೊಲೀಸರು ಕಳ್ಳತನ ಪ್ರಕರಣದ ತನಿಖೆಗಾಗಿ ಪ್ರಮುಖ ಆರೋಪಿ‌ಯಾದ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಇಂದ್ರನಗರ ನಿವಾಸಿ ಮೊಹಮ್ಮದ್ ಹುಸೇನ್ (22) ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ನಿಂದ ಬಾಡಿ ವಾರೆಂಟ್ ಪಡೆದು ಜ.13 ರಂದು ಬೆಳಗ್ಗೆ ಉಡುಪಿಯ ಹಿಡಿಯಡ್ಕ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಯನ್ನು (ಎರಡು ದಿನ)ಜ.13 ಮತ್ತು ಜ.14 ರಂದು ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಮಾಡಿದೆ‌.

ಆರೋಪಿಯನ್ನು ಪೊಲೀಸರು ಕಳ್ಳತನ ಮಾಡಿದ ವೈನ್ಸ್ ಶಾಪ್ ಗೆ ಕರೆತಂದು ಮಹಜರು ನಡೆಸಿದರು.

ಪ್ರಕರಣದ ವಿವರ: ಬೆಳ್ತಂಗಡಿ ಬಸ್ ನಿಲ್ದಾಣದ ಶ್ರೀ ಗುರುನಾರಾಯಣ ಕಟ್ಟಡದ ನೆಲ ಮಹಡಿಯಲ್ಲಿರುವ ತ್ರಿ ಸ್ಟಾರ್ ವೈನ್ಸ್ ಗೆ ಬೀಗ ಒಡೆದು ನುಗ್ಗಿದ ಕಳ್ಳರು ಸುಮಾರು ಒಂಬತ್ತು ಸಾವಿರ ಹಣ ಹಾಗೂ ಬಿಯಾರ್ ಬಾಟಲಿಗಳನ್ನು ಕಳ್ಳತನ ಮಾಡಿದ ಘಟನೆ ಆ.13 ರಂದು ಭಾನುವಾರ ರಾತ್ರಿ ಸಂಭವಿಸಿತ್ತು.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು.ಈ ಬಳಿಕ ಆರೋಪಿಗಳಿಬ್ಬರು ಉಡುಪಿ ಜಿಲ್ಲೆಯ ಕುಂದಾಪುರ ಕರ್ನಾಟಕ ಬ್ಯಾಂಕ್ ಗೆ ಅ.16 ರಂದು ಕನ್ನ ಹಾಕುವಾಗ ಕುಂದಾಪುರ ಪೊಲೀಸರಿಗೆ ರೆಡ್ ಹ್ಯಾಂಡ್ ಅಗಿ ಮೊಹಮ್ಮದ್ ಹುಸೇನ್ ಮತ್ತು ಅಪ್ರಾಪ್ತ ಬಾಲಕನೊಬ್ಬ ಸಿಕ್ಕಿಬಿದ್ದು ಜೈಲುಪಾಲಾಗಿದ್ದರು.ಪೊಲೀಸರ ವಿಚಾರ ವೇಳೆ ಬೆಳ್ತಂಗಡಿ ವೈನ್ಸ್ ಶಾಪ್ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು.

Related posts

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!