27.4 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಜ.13 ರಂದು ಕಂಠಿ ಉತ್ಸವಕ್ಕೆ ಚಾಲನೆ ನೀಡಿ ಹಾಗೂ ತಾಲೂಕಿನ 5 ಮಂದಿ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಸುರೇಂದ್ರ ರವರು ಉಪಸ್ಥಿತರಿದ್ದು ಕಂಠಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ 5 ಮಂದಿ ಕೃಷಿ ಸಾಧಕರಾದ ಜಗದೀಶ್ ಪ್ರಸಾದ್ ಮುಂಡಾಜೆ (ಸಮಗ್ರ ಕೃಷಿ), ಶಾಮ್ ಸುಂದರ್ ಭಟ್ ಬಲೆಂಜ (ಜೇನು ಕೃಷಿ), ಶ್ರೀಕೃಷ್ಣ ಭಟ್ ಲಾಯಿಲ (ಪಾರಂಪರಿಕ ಕೃಷಿ), ಈಶ್ವರ್ ಭಟ್ ಅತ್ತಾಜೆ(ಪಾರಂಪರಿಕ ಕೃಷಿ), ಜಯ ನಾರಾಯಣ ಉಪಾಧ್ಯಾಯ (ಸಮಗ್ರ ಕೃಷಿ) ರವರುಗಳನ್ನು “ಶ್ರೇಷ್ಠ ಕೃಷಿ ಸಾಧಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿಗಳು ಪ್ರಾರ್ಥಿಸಿದರು. ರೋಹಿತ್ ನಿರೂಪಿಸಿ ಧನ್ಯವಾದವಿತ್ತರು.

ಕಂಠಿ ಉತ್ಸವವು ಜ.13 ರಿಂದ ಫೆ. 13 ರವರೆಗೆ ನಡೆಯಲಿದ್ದು ವಿಶಿಷ್ಟ ಕರಿಮಣಿ ಆಭರಣಗಳು ಹಾಗೂ ಹಳೆಯ ಚಿನ್ನದ ವಿನಿಮಯದಲ್ಲಿ 151 ರೂಪಾಯಿಗಳ ಅಧಿಕ ಕೊಡುಗೆಯನ್ನು ಪಡೆಯಬಹುದು.

Related posts

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ