ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಜ.13 ರಂದು ಕಂಠಿ ಉತ್ಸವಕ್ಕೆ ಚಾಲನೆ ನೀಡಿ ಹಾಗೂ ತಾಲೂಕಿನ 5 ಮಂದಿ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಸುರೇಂದ್ರ ರವರು ಉಪಸ್ಥಿತರಿದ್ದು ಕಂಠಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ 5 ಮಂದಿ ಕೃಷಿ ಸಾಧಕರಾದ ಜಗದೀಶ್ ಪ್ರಸಾದ್ ಮುಂಡಾಜೆ (ಸಮಗ್ರ ಕೃಷಿ), ಶಾಮ್ ಸುಂದರ್ ಭಟ್ ಬಲೆಂಜ (ಜೇನು ಕೃಷಿ), ಶ್ರೀಕೃಷ್ಣ ಭಟ್ ಲಾಯಿಲ (ಪಾರಂಪರಿಕ ಕೃಷಿ), ಈಶ್ವರ್ ಭಟ್ ಅತ್ತಾಜೆ(ಪಾರಂಪರಿಕ ಕೃಷಿ), ಜಯ ನಾರಾಯಣ ಉಪಾಧ್ಯಾಯ (ಸಮಗ್ರ ಕೃಷಿ) ರವರುಗಳನ್ನು “ಶ್ರೇಷ್ಠ ಕೃಷಿ ಸಾಧಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿಗಳು ಪ್ರಾರ್ಥಿಸಿದರು. ರೋಹಿತ್ ನಿರೂಪಿಸಿ ಧನ್ಯವಾದವಿತ್ತರು.

ಕಂಠಿ ಉತ್ಸವವು ಜ.13 ರಿಂದ ಫೆ. 13 ರವರೆಗೆ ನಡೆಯಲಿದ್ದು ವಿಶಿಷ್ಟ ಕರಿಮಣಿ ಆಭರಣಗಳು ಹಾಗೂ ಹಳೆಯ ಚಿನ್ನದ ವಿನಿಮಯದಲ್ಲಿ 151 ರೂಪಾಯಿಗಳ ಅಧಿಕ ಕೊಡುಗೆಯನ್ನು ಪಡೆಯಬಹುದು.

Related posts

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!