25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

ಬೆಳ್ತಂಗಡಿ: ಕಳೆದ 8 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಜ.13 ರಂದು ಕಂಠಿ ಉತ್ಸವಕ್ಕೆ ಚಾಲನೆ ನೀಡಿ ಹಾಗೂ ತಾಲೂಕಿನ 5 ಮಂದಿ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ಶ್ರೀ ಕ್ಷೇ.ಧ.ಗ್ರಾ.ಯೋ. ಯೋಜನಾಧಿಕಾರಿ ಸುರೇಂದ್ರ ರವರು ಉಪಸ್ಥಿತರಿದ್ದು ಕಂಠಿ ಉತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ 5 ಮಂದಿ ಕೃಷಿ ಸಾಧಕರಾದ ಜಗದೀಶ್ ಪ್ರಸಾದ್ ಮುಂಡಾಜೆ (ಸಮಗ್ರ ಕೃಷಿ), ಶಾಮ್ ಸುಂದರ್ ಭಟ್ ಬಲೆಂಜ (ಜೇನು ಕೃಷಿ), ಶ್ರೀಕೃಷ್ಣ ಭಟ್ ಲಾಯಿಲ (ಪಾರಂಪರಿಕ ಕೃಷಿ), ಈಶ್ವರ್ ಭಟ್ ಅತ್ತಾಜೆ(ಪಾರಂಪರಿಕ ಕೃಷಿ), ಜಯ ನಾರಾಯಣ ಉಪಾಧ್ಯಾಯ (ಸಮಗ್ರ ಕೃಷಿ) ರವರುಗಳನ್ನು “ಶ್ರೇಷ್ಠ ಕೃಷಿ ಸಾಧಕ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪ್ರಬಂಧಕ ಅಶೋಕ್ ಬಂಗೇರ ಪ್ರಸ್ತಾವಿಸಿ ಸ್ವಾಗತಿಸಿದರು. ಸಿಬ್ಬಂದಿಗಳು ಪ್ರಾರ್ಥಿಸಿದರು. ರೋಹಿತ್ ನಿರೂಪಿಸಿ ಧನ್ಯವಾದವಿತ್ತರು.

ಕಂಠಿ ಉತ್ಸವವು ಜ.13 ರಿಂದ ಫೆ. 13 ರವರೆಗೆ ನಡೆಯಲಿದ್ದು ವಿಶಿಷ್ಟ ಕರಿಮಣಿ ಆಭರಣಗಳು ಹಾಗೂ ಹಳೆಯ ಚಿನ್ನದ ವಿನಿಮಯದಲ್ಲಿ 151 ರೂಪಾಯಿಗಳ ಅಧಿಕ ಕೊಡುಗೆಯನ್ನು ಪಡೆಯಬಹುದು.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಫೆ.10-ಮಾರ್ಚ್ 10: ಎಸ್‌ಡಿಪಿಐ ಸದಸ್ಯತ್ವ ಅಭಿಯಾನ: ಜನಸಾಮಾನ್ಯರ ಧ್ವನಿಗೆ ಶಕ್ತಿ ನೀಡಲು ಎಸ್‌ಡಿಪಿಐ ಸೇರಿ: ನವಾಝ್ ಕಟ್ಟೆ ಕರೆ

Suddi Udaya
error: Content is protected !!