24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ  ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.

Related posts

ಉಜಿರೆ: ಶ್ರೀ. ಧ. ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ರಾಷ್ಟ್ರೀಯ ಸುಪೋಷಣಾ ಮಾಸಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!