July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ಸರಕಾರ. ಇದರ ವತಿಯಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹೆಗ್ಗುಂಜೆ ರಾಜೀವ ಶೆಟ್ಟಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜ. 11 , 12 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ “ವಿನ್ನರ” ದ 14ರ ವಯೋಮಾನದ ಬಾಲಕಿಯರ ಗುಂಡೆಸೆತ ಮತ್ತು ಈಟಿ ಎಸೆತ ಸ್ಪರ್ಧೆಯಲ್ಲಿ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ, ಬೆಳಾಲು ಇಲ್ಲಿನ ಎಂಟನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಈಟಿ ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತ ವಿದ್ಯಾರ್ಥಿನಿಯನ್ನು ಶಾಲೆಯ ಪರವಾಗಿ ಸನ್ಮಾನಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ತರಬೇತಿ ನೀಡಿದ್ದರು. ಹಾಗೂ ಬೆಳ್ತಂಗಡಿ ಬಿಐಇಆರ್‌ಟಿ  ಶ್ರೀಮತಿ ಸೀತಾ ಆರ್ ಶೇಟ್ ಮಾರ್ಗದರ್ಶನ ನೀಡಿದ್ದರು.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ಮಾಡಿದರೆ ಭಾರತೀಯ ಜನತಾ ಪಾರ್ಟಿ ಸುಮ್ಮನಿರುವುದಿಲ್ಲ: ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅಸ್ತಿತ್ವಕ್ಕೆ ಕೊಡಲಿ ಏಟು ಕೊಡುವಂತಹ ಎಡಪಂತೀಯ ವಿಚಾರಧಾರೆಯ ಮಾನಸಿಕತೆಗೆ ಖಂಡನೆ: ಎಸ್.ಐ.ಟಿ ತನಿಖೆಯ ಹಂತದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ತನಿಖೆಗೆ ತೊಂದರೆ ಆಗಬಾರದೆಂಬ ನಿಟ್ಟಿನಲ್ಲಿ ಯಾವುದೇ ಹೇಳಿಕೆಯನ್ನು ನೀಡಿರಲಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಹೇಳಿಕೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!