29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya
error: Content is protected !!