37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ಳಿ ಪದಕ ಗೆದ್ದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಜರಗಿದ 68ನೇ ರಾಷ್ಟ್ರೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕ ಗಳಿಸಿದ ತಂಡದ ಸದಸ್ಯರಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತದ ಮೂಲಕ ಅಭಿನಂದಿಸಲಾಯಿತು.


ವಿದ್ಯಾರ್ಥಿಗಳು ವಿಜಯವಾಡದಿಂದ ಆಗಮಿಸಿದ ಸಂದರ್ಭ ಜ.13 ರಂದು ಉಜಿರೆಯಿಂದ ವಾಹನಗಳ ಭವ್ಯ ಮೆರವಣಿಗೆ ಮೂಲಕ ಮುಂಡಾಜೆಗೆ ಕರೆತರಲಾಯಿತು.


ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿನಯಚಂದ್ರ, ಕಾರ್ಯದರ್ಶಿ ನಾರಾಯಣ ಗೌಡ, ಸಂಚಾಲಕನಾರಾಯಣ ಫಡಕೆ, ಮುಂಡಾಜೆ ಪಂಚಾಯಿತಿ ಅಧ್ಯಕ್ಷ ಗಣೇಶ ಬಂಗೇರ, ಉಪಾಧ್ಯಕ್ಷೆ ಸುಮಲತಾ, ಪಿಡಿಒ ಗಾಯತ್ರಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ಗೀತಾ, ಉಪನ್ಯಾಸಕ ವೃಂದದವರು, ತರಬೇತಿ ನೀಡಿದ ದೈಹಿಕ ಶಿಕ್ಷಕರಾದ ಗುಣಪಾಲ ಎಂ.ಎಸ್., ಸಂದೀಪ್ ಶೆಟ್ಟಿ, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಕಲಾವಿದ ಜಯರಾಮ ಕೆ. ವಿದ್ಯಾರ್ಥಿಗಳ ಸಾಧನೆ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಮುಂಡಾಜೆಯ ವಿರಾಟ್ ಹಿಂದೂ ಸೇವಾ ಸಂಘ ಸಹಕರಿಸಿತು.

Related posts

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮದ ಭಕ್ತರಿಂದ ಹೊರೆಕಾಣಿಕೆ ಪ್ರಯುಕ್ತ ಅಕ್ಕಿ ಸಮರ್ಪಣೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya
error: Content is protected !!