25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ರಲ್ಲಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ಅಧಿಕಾರಕ್ಕೆ ಏರಲಿದ್ದಾರೆ.

ಬಿಜೆಪಿ ನಾಯಕ, ವೇಣೂರು ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ಇವರ ನೇತೃತ್ವದ ಸಹಕಾರ ಭಾರತಿ ಬಿಜೆಪಿ ಬೆಂಬಲಿತ‌ 12 ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾಗವಹಿಸಿ ಗೆಲುವು ದಾಖಲಿಸಿದರು.

ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆದ ಚುನಾವಣೆಯು ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಸುಂದರ ಹೆಗ್ಡೆ,ರಾಮದಾಸ್ ನಾಯಕ್,ಸಂದೀಪ್ ಹೆಗ್ಡೆ,ರತ್ನಾಕರ ಬಿ,ಪ್ರವೀಣ್ ಪೂಜಾರಿ,ಕೃಷ್ಣಪ್ಪ ಮೂಲ್ಯ,ನಾಗಪ್ಪ,ರಾಜು ನಾಯ್ಕ,ಪ್ರಶಾಂತ್ ಪೂಜಾರಿ,ಎಂ.ಆರ್ ಸಂತೋಷ್,ಆಶಾ ಸುಂದರ್,ರೋಹಿಣಿ ಪ್ರಕಾಶ್ ಜಯಗಳಿಸಿದರು.ಕಾಂಗ್ರೇಸ್ ಬೆಂಬಲಿತಾ ಅಭ್ಯರ್ಥಿಗಳಾದ ಸೇಸ,ವಿಮಲ ನಾಯ್ಕ,ಲಕ್ಷ್ಮಣ ಪೂಜಾರಿ,ತೋಮಸ್ ಆರ್ ನೊರೊನ್ನ,ಗುಣವತಿ,ಸೂರ್ಯಪ್ರಭಾ,ಚಂದಪ್ಪ ಮೂಲ್ಯ,ದಯಾನಂದ ದೇವಾಡಿಗ,ದೇಜಪ್ಪ ಶೆಟ್ಟಿ ಪಿ,ಲಕ್ಷ್ಮಣ ಪಿ,ವಿಶ್ವನಾಥ ಪೂಜಾರಿ,ಹರೀಶ್ ಕುಮಾರ್ ಪೊಕ್ಕಿ ಪರಜಯಗೊಂಡರು.

ಜ. 12 ರಂದು ಚುನಾವಣೆ ನಡೆದಿದೆ. ಚುನಾವಣಾಧಿಕಾರಿಯಾಗಿ ಪ್ರತಿಮಾ ಸಹಕರಿಸಿದರು.ವೇಣೂರು ಸಿಎ ಬ್ಯಾಂಕಿನ‌ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಹಾಗೂ ಸಿಬ್ಬಂದಿಗಳು ಸಹಕರಿಸಿದರು.ಶಾಸಕ ಹರೀಶ್ ಪೂಂಜ,ಜಯಂತ್ ಕೋಟ್ಯಾನ್ ಹಾಗೂ ಇತರರು ಆಗಮಿಸಿ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

ಫಲಿತಾಂಶವನ್ನು ಹೈಕೋರ್ಟ್ ಆದೇಶದ ಬಳಿಕ ಘೋಷಣೆ ಮಾಡಲಾಗುತ್ತದೆ ಎನ್ನಲಾಗಿದೆ.

Related posts

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ದೇವಸ್ಥಾನದ ಬ್ರಹ್ಮಕಲಶ: ಚಪ್ಪರ ಮುಹೂರ್ತ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya
error: Content is protected !!