September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅನಾರು ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ : ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜ.14ರಿಂದ 18 ರವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.


ಇಂದು (ಜ. 14) ತೋರಣ ಮುಹೂರ್ತ, ಊರವರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.

ಈ ವೇಳೆ ದೇವಸ್ಥಾನದ 2025 ರ ನೂತನ ಕ್ಯಾಲೆಂಡರ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು, ಅರ್ಚಕ ಯು.ವಿ. ಗುರುಪ್ರಸಾದ್ ನಿಡ್ವಣ್ಣಾಯ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್ , ಪವಿತ್ರಪಾಣಿ ಶ್ರೀಧರ ಶಬರಾಯ, ದೇವಪಾಲ ಅಜ್ರಿ ಉಳಿಯಬೀಡು, ಯುವರಾಜ ಜೈನ್ ಉಳಿಯಬೀಡು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರುಕ್ಮಯ್ಯ ಗೌಡ ಪದಳ, ಕಾರ್ಯದರ್ಶಿ ಆನಂದ ಗೌಡ ಕಲ್ಕುಡಂಗೆ, ಸೇವಾ ಸಮಿತಿ ಅಧ್ಯಕ್ಷ ಹರೀಶ್ ಗೌಡ ಅಪ್ರೋಡಿ, ಕಾರ್ಯದರ್ಶಿ ಶರತ್ಚಂದ್ರ ಹಿರ್ತಡ್ಕ ಹಾಗೂ ಜಾತ್ರೋತ್ಸವ ಸಮಿತಿ , ಸೇವಾ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಂಜೆ ಧ್ವಜಾರೋಹಣ , ರಾತ್ರಿ ನಡೆಯಲಿರುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್ ಆಗಮಿಸಲಿದ್ದಾರೆ.

ಈ ವೇಳೆ ಧರ್ಮಸ್ಥಳ ಕಲ್ಲೇರಿ ಶ್ರೀ ಸಿದ್ಧಿವಿನಾಯಕ ಸ್ಟೋರ್ ಉದ್ಯಮಿಗಳಾದ ರತ್ನಾಕರ ಪ್ರಭು, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ಬಿ. ಸೀತಾರಾಮ ತೋಳ್ಪಾಡಿತ್ತಾಯ ಧರ್ಮಸ್ಥಳ, ಹಿರಿಯ ಯಕ್ಷಗಾನ ಕಲಾವಿದ ನರೇಂದ್ರ ಕುಮಾರ್ ಉಜಿರೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಪ್ರಸಿದ್ಧ ಅತಿಥಿ ಕಲಾವಿದರಿಂದ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ ಜರಗಲಿದೆ.

Related posts

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya
error: Content is protected !!