30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ನಡೆಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ ಸದಾ ಇರಲೆಂದು ಶುಭ ಹಾರೈಸಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.


ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸೀತಾರಾಮ್ ಭಟ್, ಡಾ. ಆದಿತ್ಯರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂಧಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು

Related posts

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಪಾರಿಜಾತ ರಿಯಲ್ ಎಸ್ಟೇಟ್ ಶುಭಾರಂಭ

Suddi Udaya
error: Content is protected !!