25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಉಜಿರೆಯ ಬೆನಕ ಆಸ್ಪತ್ರೆಗೆ ಜ.13 ರಂದು ಚಿತ್ತೈಸಿದ ಕುಕ್ಕೆ ಸುಬ್ರಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ನಡೆಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ ಸದಾ ಇರಲೆಂದು ಶುಭ ಹಾರೈಸಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.


ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸೀತಾರಾಮ್ ಭಟ್, ಡಾ. ಆದಿತ್ಯರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂಧಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು

Related posts

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಮಾಲಾಡಿ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ರೂ 1.0 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಾಲಾಡಿ ಗ್ರಾಮದ ಪೆರ್ಡೆ ಕ್ರಾಸ್ ನಿಂದ ಊರ್ಲ ಕಾಂಕ್ರೀಟೀಕರಣ ರಸ್ತೆ ಕಾಮಗಾರಿ ಉದ್ಘಾಟನೆ

Suddi Udaya
error: Content is protected !!