32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

ಉಜಿರೆ: ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಜ.14 ರಂದು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ರಾಜಶೇಖರ ಹಳ್ಳಿ ಮನೆ ದೀಪವನ್ನು ಬೆಳಗಿಸಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಸೂರ್ಯನು ತನ್ನನ್ನು ತಾನು ಅವಲೋಕ ಮಾಡಿಕೊಳ್ಳುವ ಕಾಲವಿದು . ಸೂರ್ಯ ಯಾರಿಗೂ ಮೋಸ ಮಾಡುವುದಿಲ್ಲ ಎಲ್ಲರಿಗೂ ಒಂದೇ ರೀತಿಯ ಶಾಖವನ್ನು ಕೊಡುತ್ತಾನೆ. ಈ ಕಾರಣಕ್ಕೆ ಜಗತ್ತಿನ ವಿಜ್ಞಾನಿಗಳು ಸೂರ್ಯನಿಗೆ ಕೈ ಮುಗಿಯುತ್ತಾರೆ. ಮನುಷ್ಯನು ಕೂಡ ಈ ಸಮಯದಲ್ಲಿ ಅವಲೋಕನ ಮಾಡಿಕೊಳ್ಳಬೇಕಾದ ಸಂಧರ್ಭ ಇದು. ಸಂಕ್ರಮಣ ಎಂದರೆ ಬದಲಾವಣೆ ಕಾಲ .ದಕ್ಷಿಣಾಯಣದಿಂದ ಉತ್ತರಾಯಣ ಕಾಲದಲ್ಲಿ ಸೂರ್ಯ ಹೆಚ್ಚು ಪ್ರಕಾಶಮಾನವಾಗಿ ಹೊಳೆಯುತ್ತಾನೆ.ಈ ಪ್ರಕಾಶವನ್ನುನೀರು ಹೀರಿಕೊಳ್ಳುತ್ತದೆ . ಆದ್ದರಿಂದ ಈ ದಿನ ಸಮುದ್ರ , ಹೊಳೆಗಳಿಗೆ ತೆರಳಿ ಸ್ನಾನ ಮಾಡಿದರೆ ಚರ್ಮರೋಗ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನದಂದು ಎಳ್ಳಿನ ಎಣ್ಣೆಯನ್ನು ಹಚ್ಚಿ ಸ್ನಾನ ಮಾಡಿದರೆ ಚರ್ಮರೋಗಗಳು ವಾಸಿಯಾಗುತ್ತದೆ . ಚರ್ಮದ ಒಣಗುವಿಕೆಯನ್ನು ತಡೆಯಲು
ಎಳ್ಳು, ಕಡಲೆ ,ಬೆಲ್ಲ ,ಸಜ್ಜೆ ಸೇವನೆಯಿಂದ ನಮ್ಮ ದೇಹ ಸದೃಢವಾಗಿರುತ್ತದೆ . ಹಾಗು ಹೆಚ್ಚು ಪ್ರೋಟೀನ್ ದೊರಕುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜರವರು ವಹಿಸಿ ಎಳ್ಳು ಬೆಲ್ಲ ತಿಂದು ನಾಲ್ಕು ಒಳ್ಳೆಯ ಮಾತಾಡು ಎನ್ನುವ ಗಾದೆ ಮಾತಿನೊಂದಿಗೆ ಸಂಕ್ರಾಂತಿಯ ವಿಶೇಷತೆಯನ್ನು ತಿಳಿಸಿದರು.


ವಿದ್ಯಾರ್ಥಿ ನಿಶಿತ್ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಿ ಯಶವಂತ ಸ್ವಾಗತಿಸಿದರು. ನಿಶಿತ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸುಮಂತ್ ನೆರವೇರಿಸಿದರು . ವೇದಿಕೆಯಲ್ಲಿ ರತ್ನ ಮಾನಸ ಸಿಬ್ಬಂದಿಗಳಾದ ರವಿಚಂದ್ರ, ಉದಯಾರಾಜ್ , ದೀಪಕ್ ಉಪಸ್ಥಿತರಿದ್ದರು .

Related posts

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya
error: Content is protected !!