23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

ಉಜಿರೆ:  ಉತ್ತರಾಯಣ ಪುಣ್ಯಕಾಲದ ಮಕರ ಸಂಕ್ರಮಣ  ಶುಭದಿನ ಜ. 14 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ  ಚಾಲನೆ ನೀಡಲಾಯಿತು. 

ಮುಂಜಾನೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ರ  ನೇತೃತ್ವದಲ್ಲಿ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳ ಮತ್ತು ರಾಮಚಂದ್ರ ಹೊಳ್ಳರು  ಪ್ರಾರ್ಥಿಸಿ  ಶುಭಾರಂಭಗೊಳಿಸಿದರು.  ಶಮನ ಕ್ಲಿನಿಕ್ ನ  ಚಕ್ರಪಾಣಿ ಸರಳಾಯರ ಪ್ರಾಯೋಜಕತ್ವದಲ್ಲಿ  ನಡೆಸಲ್ಪಡುವ  ಉಡುಪಿಯ  ಮದ್ವೇಶ ಆಚಾರ್ಯ  ಮಠದ   ಅವರ “ಭಾಗವತ ಪಾತ್ರ ಪ್ರಪಂಚ-ನೀತಿ ಕಥೆಗಳು” ಪ್ರವಚನ ಸಪ್ತಾಹಕ್ಕೆ  ಶರತ್ ಕೃಷ್ಣ ಪಡುವೆಟ್ನಾಯರು   ದೀಪ ಪ್ರಜ್ವಲಿಸಿ ಚಾಲನೆ ನೀಡಿ ,ಸ್ವಾಗತಿಸಿ  ಕ್ಷೇತ್ರದ   ವತಿಯಿಂದ  ಧಾರ್ಮಿಕ ಜ್ಞಾನ ಪ್ರಸಾರಕ್ಕೆ ವಿಶೇಷ ಆದ್ಯತೆ ನೀಡುತ್ತಾ  ಬರುತ್ತಿದ್ದು , ಉತ್ಸವ ಕಾಲದಲ್ಲಿ  ಪುರಾಣ ಪ್ರವಚನ ಸಪ್ತಾಹ   ನಡೆಸಲು  ಯೋಜಿಸಿದ್ದೇವೆ.  ಭಗವದ್ಭಕ್ತರು  ಜ್ಞಾನ ಸತ್ರದಲ್ಲಿ  ಭಾಗವಹಿಸಿ  ಪುಣ್ಯಭಾಜನರಾಗಬೇಕೆಂದರು.                                               

ಪ್ರವಚನಕಾರ ಮದ್ವೇಶ  ಆಚಾರ್ಯ ಮಠದ ಅವರು ಉಜಿರೆ ಕ್ಷೇತ್ರ ಜ್ಞಾನಕ್ಕೆ ಪ್ರಾಧಾನ್ಯತೆ ನೀಡುತ್ತಿದ್ದು ಹರಿವಾಯು ಪ್ರೇರಣೆಯಂತೆ  ಭಾಗವತ ಪಾತ್ರಗಳ ವಿಶೇಷತೆಯನ್ನು   ತಿಳಿಸಲು ಬಯಸುತ್ತೇವೆ. ಉಚ್ಚಭೂತಿಯೆಂದರೆ ಹೇರಳ ಸಂಪತ್ತು ಇದ್ದ ಜಾಗ ಎಂದರ್ಥ.  ಇಲ್ಲಿ   ಘನ ವಿದ್ವಾಂಸರು  ನೆಲೆಯಾಗಿದ್ದು  ಮಧ್ವಾಚಾರ್ಯರ ಜ್ಞಾನವನ್ನು ಪರೀಕ್ಷಿಸಿ ಅವರಲ್ಲಿ ದೋಷ ಹುಡುಕುವ ಪ್ರಯತ್ನ ಮಾಡಿ ಸೋತರು. ಮಧ್ವಾಚಾರ್ಯರು  ತನ್ನ 37 ಗ್ರಂಥಗಳ ಪೈಕಿ  ಇಲ್ಲೇ “ಕರ್ಮ ನಿರ್ಣಯ”ಗ್ರಂಥ  ರಚಿಸಿ ದೇವರಿಗೆ ಸಮರ್ಪಿಸಿದ ಜಾಗ  ಉಜೇರ್ಯ ಮುಂದೆ ಉಜಿರೆ ಹೆಸರಿನಿಂದ ಪ್ರಸಿದ್ಧಿ ಪಡೆಯಿತು. ಉತ್ಸವ ಕಾಲದಲ್ಲಿ ದೇವರು ಸಂತುಷ್ಟನಾಗಿ  ಭಕ್ತರನ್ನು ಅನುಗ್ರಹಿಸುವ ಪರ್ವ ಕಾಲ.  18  ಸಹಸ್ರ ಸ್ತೋತ್ರಗಳನ್ನೊಳಗೊಂಡ   ಭಾಗವತ  ಪುರಾಣದ ಪಾತ್ರಗಳನ್ನು  ಸಾದರಪಡಿಸಲು ಪ್ರಯತ್ನಿಸಲಾಗುವುದು. ಜ 2೦ರವರೆಗೆ ಪ್ರತಿದಿನ ಬೆಳಿಗ್ಗೆ 9.3೦ರಿಂದ 12 ರವರೆಗೆ  ಪ್ರವಚನ ನಡೆಯಲಿದೆ  ಎಂದರು.                                                 

ಪ್ರವಚನ ಸತ್ರದ ಪ್ರಾಯೋಜಕರಾದ ಶ್ರೀಮತಿ ಶಾರದಾ ಮತ್ತು ಚಕ್ರಪಾಣಿ ಸರಳಾಯ,   ದ ಕ. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಾ!ಎಂ ಪಿ ಶ್ರೀನಾಥ್, ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್  ಮೊದಲಾದವರು ಉಪಸ್ಥಿತರಿದ್ದರು.                                                                       

ಇದೆ ಸಂದರ್ಭದಲ್ಲಿ  ಧರ್ಮಸ್ಥಳದ ಕಮಲಾಕ್ಷ ಗುಡಿಗಾರ್ ಸಾಹಿತ್ಯ ಮತ್ತು ಸಂಗೀತ ನೀಡಿ   ಕೇಶವ ದೇವಾಂಗ  ಬನಶಂಕರಿ  ಅವರು  ಹಾಡಿರುವ   “ಶ್ರೀ ಲಕ್ಷ್ಮಿ ಜನಾರ್ದನ” ಕನ್ನಡ ಭಕ್ತಿ ಗೀತೆಗಳನ್ನು  ಶರತ್ ಕೃಷ್ಣ ಪಡುವೆಟ್ನಾಯರು ಬಿಡುಗಡೆಗೊಳಿಸಿ ಶುಭ ಕೋರಿದರು.                                     

ಧ್ವಜಾರೋಹಣ ಹಾಗು ಭಂಡಾರ ಏರುವುದರೊಂದಿಗೆ  ವರ್ಷಾವಧಿ ಜಾತ್ರೆಗೆ ಸಂಭ್ರಮದ ಚಾಲನೆ ದೊರೆಯಿತು.ಜ 23 ರವರೆಗೆ  ವಿವಿಧ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು  ನಡೆಯಲಿವೆ.

Related posts

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!