23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

ವೇಣೂರು:ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಪತ್ರಕರ್ತ ಎಚ್ ಮೊಹಮ್ಮದ್ ವೇಣೂರು ಮಾತಾಡಿ ಖತೀಬರಿಗೆ ಶುಭ ಹಾರೈಸಿದರು.

ಪ್ರಮುಖರಾದ ಚಿಕ್ಕಮಗಳೂರಿನ ಡಾ ಸಲೀಮ್ ಗರ್ಡಾಡಿ,ಅಬ್ದುಲ್ ರಹಿಮಾನ್ ಕಟ್ಟೆ,ರಫೀಕ್ ಪಡ್ಡ ,ಮಹಮ್ಮದ್ ಪಿಜೆ, ಖಾಲಿದ್ ಪುಲಬೆ, ಅಬ್ದು ಸಲಾಂ ಕೇಶವನಗರ, ನಜೀರ್ ಪೆರಿಂಜೆ ,ಪೆರಿಂಜೆ ಮದರಸದ ಅಧ್ಯಾಪಕ ಮೊಹಮ್ಮದ್ ಅಲ್ತಾಫ್ ,ಕೆಪಿ ಬಶೀರ್ ,ಶಬ್ಬೀರ್ ಕಟ್ಟೆ , ಶಬ್ಬೀರ್ ಪಡ್ಡ,ಸದರ್ ಮೊಹಲ್ಲಿಂ ಸೇರಿದಂತೆ ಸಿಬಂದಿವರ್ಗ ಜಮಾತಿನ ಸದಸ್ಯರು ಉಪಸ್ಥಿತರಿದ್ದರು.

ಮಸೀದಿ ಸಮಿತಿ ಮತ್ತು ಜಮಾತಿನ ಸದಸ್ಯರು ಶಾಲು ಹೊದಿಸಿ ಶುಭ ಹಾರೈಸಿದ ಬಗ್ಗೆ ಮಾತಾಡಿದ ಖತೀಬ್ ಅಶ್ರಫ್ ಫೈಝಿ, ಜಮಾತಿಗೆ, ಈ ನಾಡಿಗೆ ಮತ್ತು ದೇಶದ ಉನ್ನತಿಗಾಗಿ ಪ್ರಾರ್ಥಿಸುತ್ತೇನೆಂದರು. ಇಸ್ಮಾಯಿಲ್ ಎಚ್ ಗಾಂಧಿನಗರ ಸ್ವಾಗತಿಸಿ, ವಂದಿಸಿದರು.

Related posts

ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!