27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಮದ್ದಡ್ಕ ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ : ಐಜಿಎನ್ಐಟಿಇ ಮ್ಯಾನೇಜ್ಮೆಂಟ್ ಫೆಸ್ಟ್ ಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್

Suddi Udaya
error: Content is protected !!