July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

ಉಜಿರೆ : ಮಧ್ಯಪ್ರದೇಶದ ಭೂಪಾಲ್ ನ ರವೀಂದ್ರ ಭವನದಲ್ಲಿ ಜ. 3 ರಿಂದ 6 ರವರೆಗೆ ನಡೆದಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ)ದ, ವಿದ್ಯಾರ್ಥಿಯಾದ 10ನೇ ತರಗತಿಯ ಅಧಿಶ್ ಬಿ. ಸಿ.ಹಿರಿಯ ವಿಭಾಗದಲ್ಲಿ ಭಾಗವಹಿಸಿ ” ವ್ಯಾಲ್ಯೂ ಎಡಿಶನ್ ಫಾರ್ ಅಗ್ರಿಕಲ್ಚರ್ ವೇಸ್ಟ್ ಅಂಡ್ ವೀಡ್ಸ್ ” ಎಂಬ ವಿಜ್ಞಾನದ ಸಂಶೋಧನೆಯನ್ನು ಮಂಡಿಸಿದ್ದಾರೆ.


ಕಿರಿಯ ವಿಭಾಗದಲ್ಲಿ 9ನೇ ತರಗತಿಯ ಸಚಿತ್ ಭಟ್ ಭಾಗವಹಿಸಿ ” ವ್ಯಾಲ್ಯೂ ಆಡೆಡ್ ಪ್ರಾಡಕ್ಟ್ಸ್ ಫ್ರಮ್ ಅನ್ಯೂಸ್ಡ್ ಬನಾನಾ ಫೈಬರ್ಸ್” ಎಂಬ ಸಂಶೋಧನೆಯನ್ನು ಮಂಡಿಸಿರುತ್ತಾರೆ. ಈ ಎರಡು ವಿದ್ಯಾರ್ಥಿಗಳು ಸಂಶೋಧನೆಯು ಅತ್ಯುತ್ತಮ ಸಂಶೋಧನೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ವಿದ್ಯಾರ್ಥಿಗಳು ತಮ್ಮ ಸಹವರ್ತಿಗಳಾದ 10ನೇ ತರಗತಿಯ ಆಲಾಪ್ ಎಂ ಮತ್ತು 9ನೇ ತರಗತಿಯ ಸುಜನ್ ಗೌಡ ರೊಂದಿಗೆ ಜೊತೆಯಾಗಿ ಸಂಶೋಧನೆಯನ್ನು ನಡೆಸಿರುತ್ತಾರೆ.


ಈ ಸಂಶೋಧನೆಗಳಿಗೆ ಮಾರ್ಗದರ್ಶಿ ಶಿಕ್ಷಕರಾಗಿ ಶ್ರೀಮತಿ ಧನ್ಯವತಿ.ಕೆ ಮತ್ತು ಶ್ರೀಮತಿ ಶೋಭಾ.ಎಸ್ ಕಾರ್ಯನಿರ್ವಹಿಸಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರ ಪ್ರಶಂಸೆಗೆ ಪಾತ್ರರಾದ್ದಾರೆ.

Related posts

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!